7:28 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿಗೆ ಇನ್ನು ಅರ್ಜಿ ಹಾಕಬೇಡಿ; ನೀವು ಆರ್ಹರಾಗಿದ್ದರೆ, ಅದು ನಿಮ್ಮನ್ನೇ ಹುಡುಕಿ ಬರಲಿದೆ!

05/02/2022, 19:49

ಮಂಗಳೂರು(reporterkarnataka.com): ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಹೇಳಿದರು.

ಅವರು ಶನಿವಾರ ನಗರದ ಕೊಡಿಯಾಲ್ ಬೈಲ್‍ನ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದರು.

ಪ್ರಶಸ್ತಿಗಾಗಿ ನಾವು ಎಂದು ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದರು. 

ನಾಡಿನೆಲ್ಲಡೆ ನೀರಿಗಾಗಿ ಗಲಾಟೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದು ಅವರು ಹೇಳಿದರು. 

ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಪೂರ್ತಿಯ ಸೆಲೆಯಂತಿದೆ. ಇಂತಹ ಭಗೀರಥರನ್ನು ಕೇಂದ್ರ ಸರ್ಕಾರ ಗುರುತಿಸಿ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತೋಷದ ವಿಷಯ ಎಂದರು.

ಸನ್ಮಾನ ಸ್ವೀಕರಿಸಿ ಮತನಾಡಿದ ಮಹಾಲಿಂಗ ನಾಯ್ಕ ಅವರು ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿತು ಸಾರ್ವಜನಿಕರು ಮಿತವಾಗಿ ಉಪಯೋಗಿಸಬೇಕು ಎಂದು ತಿಳಿಸಿದರು.

ಗುಡ್ಡದಲ್ಲಿ ಮೂರು ಬಾವಿ ಅಗದೆ ನೀರು ಸಿಗದೆ ಸುರಂಗ ತೋಡಲು ಮುಂದಾದಾಗ ಇವನ್ಯಾಕೆ ಗುಡ್ಡದಲ್ಲಿ ಇನ್ನೂ ಇದ್ದಾನೆ, ಅಲ್ಲಿ ನೀರು ಸಿಗದು ಎಂದೇ ಹೆಚ್ಚಿನವರು ಹೇಳಿದ್ದರು. ಆದರೆ ಅಂದು ನನಗೆ ಅದು ಅನಿವಾರ್ಯವಾಗಿತ್ತು. ನಾನು ಛಲ ಬಿಡದೆ ಯಾಕೆ ನೀರು ಸಿಗುವುದಿಲ್ಲ ಎಂದು ನನ್ನ ಕಾಯಕ ಮಾಡಿದೆ. ಅದಕ್ಕೆ ಪ್ರತಿ ಫಲ ದೊರಕಿದೆ. ಇಂದು ಬೋಳುಗುಡ್ಡದಲ್ಲಿ ಹಚ್ಚ ಹಸಿರಿನ ಕೃಷಿ ಇದೆ. ಮಳೆ ನೀರನ್ನು ಕೂಡಾ ನನ್ನ ಜಾಗದಿಂದ ಹೊರಹೋಗದಂತೆ ಮಾಡಿ ಅಂತರ್ಜಲವನ್ನು ಕಾಪಾಡಿಕೊಂಡು ಬಂದಿದ್ದೇನೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜೇಶ್ ಸ್ವಾಗತಿಸಿದರು. ಶಾರದಾ ವಿದ್ಯಾಲಯದ ಉಪ ಪ್ರಾಂಶುಪಾಲ ದಯಾನಂದ ಕಟೀಲು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು