1:03 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು