9:37 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್

06/02/2022, 10:21

ಮುಂಬಾಯಿ :

ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು