11:34 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್

06/02/2022, 10:21

ಮುಂಬಾಯಿ :

ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು