8:14 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು