8:33 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು