3:15 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು