12:19 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

06/02/2022, 21:12

ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್‌ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್‌ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

‘ಕಾಳಜಿ ಹಾಗೂ ದಯೆಯ ಪ್ರತಿರೂಪವೇ ಆಗಿದ್ದ ಲತಾ ದೀದಿ ಅವರನ್ನು ಕಳೆದುಕೊಂಡ ದುಃಖವನ್ನು ಶಬ್ದದದಲ್ಲಿ ವಿವರಿಸಲಾಗುವುದಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅವರು ಭಾರತೀಯ ಸಂಸ್ಕೃತಿಯ ಪ್ರತಿನಿಧಿಯಾಗಿದ್ದರು. ತಮ್ಮ ಕಂಠದಿಂದ ಜನರನ್ನು ಮಂತ್ರಮುಗ್ದರನ್ನಾಗಿರುವ ಶಕ್ತಿ ಅವರಲ್ಲಿತ್ತು. ಮುಂದಿನ ಪೀಳಿಗೆಗೆ ಅವರು ಸದಾ ಪ್ರೇರಣೆಯಾಗಿರುತ್ತಾರೆ’ ಎಂದಿದ್ದಾರೆ.

‘ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಮೂಡಿಸುತ್ತವೆ. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದ್ದಾರೆ. ಸಿನಿಮಾ ಕ್ಷೇತ್ರ ಹೊರತುಪಡಿಸಿ ಲತಾ ಅವರು ಭಾರತದ ಅಭಿವೃದ್ಧಿಯ ಕುರಿತು ತುಡಿತ ಹೊಂದಿದ್ದರು. ಭಾರತವನ್ನು ಒಂದು ಬಲಿಷ್ಠ, ಅಭಿವೃದ್ಧಿ ದೇಶವನ್ನಾಗಿ ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

‘ಲತಾ ದೀದಿಯಿಂದ ಹೆಚ್ಚು ಪ್ರೀತಿ ಪಡೆದಿದ್ದೇನೆ, ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬ ಎಂದು ಹೇಳುವುದು ನನಗೆ ಹೆಮ್ಮೆ ಅನಿಸುತ್ತದೆ. ಅವರೊಂದಿಗೆ ನಾನು ಕಳೆದ ಕ್ಷಣಗಳು, ಆಡಿದ ಮಾತುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ’. ಲತಾ ದೀದಿಯನ್ನು ಕಳೆದುಕೊಂಡ ದೇಶದ ಜನತೆಗೆ ಕೂಡ ಪ್ರಧಾನಿ ಮೋದಿ ಸಾಂತ್ವಾನ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು