8:59 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು