3:55 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ

07/02/2022, 09:49

ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮಾಡಲಿದ್ದೇವೆ ಎಂದು ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೂರಾರು ವರ್ಷಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುತ್ತಾ ಬರುತ್ತಿರುವ ಮತ್ತು ಭಾರತದ ಸಂವಿಧಾನದಲ್ಲೂ ಅವಕಾಶ ಕಲ್ಪಿಸಲಾದ ಹಿಜಾಬ್, ಸ್ಕಾರ್ಫ್ ನ ಬಗ್ಗೆ ತೀರಾ ಅನಗತ್ಯವಾದ ವಿವಾದವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವ ಹುನ್ನಾರ ನಡೆಯುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಬದ್ಧವಾದ ಹಿಜಾಬ್ ಧರಿಸುವ ಪ್ರಕ್ರಿಯೆಗೆ ತಡೆಯೊಡ್ಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣ ಶಾಶ್ವತ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಶ್ರಫ್ ಒತ್ತಾಯಿಸಿದ್ದಾರೆ. 

ಹಿಜಾಬ್ ಧಾರಣೆ ಮುಸ್ಲಿಮ್ ಧರ್ಮದ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕು.ಇದನ್ನು ಯಾವುದೇ ಬೆಲೆ ತೆತ್ತು ಸಂರಕ್ಷಿಸ ಲಾಗುವುದು. ಹಿಜಾಬ್ ಸಂಬಂಧಿತ ವಿವಾದ ಕರ್ನಾಟಕ ಉಚ್ಛನ್ಯಾಯಲಯ ದಲ್ಲಿ ಇದ್ದು, ತೀರ್ಪನ್ನು ಗೌರವಿಸಲಾಗುವುದು. ಭಾರತ ದ ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗೆ ಮುಕ್ತ ಸ್ವಾತಂತ್ರ್ಯ ವಿರುವುದರಿಂದ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆ ಎಂಬ ಆಶಾ ಭಾವನೆ ಇದೆ ಎಂದು ಅಶ್ರಫ್ ರವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು