4:11 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ

07/02/2022, 09:49

ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮಾಡಲಿದ್ದೇವೆ ಎಂದು ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನೂರಾರು ವರ್ಷಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುತ್ತಾ ಬರುತ್ತಿರುವ ಮತ್ತು ಭಾರತದ ಸಂವಿಧಾನದಲ್ಲೂ ಅವಕಾಶ ಕಲ್ಪಿಸಲಾದ ಹಿಜಾಬ್, ಸ್ಕಾರ್ಫ್ ನ ಬಗ್ಗೆ ತೀರಾ ಅನಗತ್ಯವಾದ ವಿವಾದವನ್ನು ಸೃಷ್ಟಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುವ ಹುನ್ನಾರ ನಡೆಯುತ್ತಿರುವುದು
ವಿಷಾದನೀಯ ಎಂದು ಅವರು ಹೇಳಿದ್ದಾರೆ.

ಸಂವಿಧಾನ ಬದ್ಧವಾದ ಹಿಜಾಬ್ ಧರಿಸುವ ಪ್ರಕ್ರಿಯೆಗೆ ತಡೆಯೊಡ್ಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸೌಹಾರ್ದ ವಾತಾವರಣ ಶಾಶ್ವತ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅಶ್ರಫ್ ಒತ್ತಾಯಿಸಿದ್ದಾರೆ. 

ಹಿಜಾಬ್ ಧಾರಣೆ ಮುಸ್ಲಿಮ್ ಧರ್ಮದ ಧಾರ್ಮಿಕ ಮತ್ತು ಸಾಂವಿಧಾನಿಕ ಹಕ್ಕು.ಇದನ್ನು ಯಾವುದೇ ಬೆಲೆ ತೆತ್ತು ಸಂರಕ್ಷಿಸ ಲಾಗುವುದು. ಹಿಜಾಬ್ ಸಂಬಂಧಿತ ವಿವಾದ ಕರ್ನಾಟಕ ಉಚ್ಛನ್ಯಾಯಲಯ ದಲ್ಲಿ ಇದ್ದು, ತೀರ್ಪನ್ನು ಗೌರವಿಸಲಾಗುವುದು. ಭಾರತ ದ ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗೆ ಮುಕ್ತ ಸ್ವಾತಂತ್ರ್ಯ ವಿರುವುದರಿಂದ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿಯಲಿದೆ ಎಂಬ ಆಶಾ ಭಾವನೆ ಇದೆ ಎಂದು ಅಶ್ರಫ್ ರವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು