10:54 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೋಲಾರ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿ: ಆಹಾರದಿಂದ ಔಷಧಿವರೆಗೂ ಬೇಕು ಬ್ರೋಕರ್ ಗಳು!

08/02/2022, 09:25

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿನ ದಲ್ಲಾಳಿಗಳಿಗೆ ಹಾವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸುವಂತೆ ರೈತ ಸಂಘದಿಂದ ಶಸ್ತ್ರಚಿಕಿತ್ಸಕಾರಿಗಳಾದ ಡಾ . ರಘುನಾಥ್‌ ರೆಡ್ಡಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. 

ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರದವರೆಗೆ ಆಹಾರದಿಂದ ಔಷಧಿಗಳವರೆಗೂ ಬಡವರು ಪಡೆಯಬೇಕಾದರೆ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ನೆರಳು ಇಲ್ಲದೆ ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲವೆಂದು ಅವ್ಯವಸ್ಥೆ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು . ಮನವಿ ನೀಡಿ ಮಾತನಾಡಿದವರು ೧೦೦ ಹಾಸಿಗೆಗಳ ಆಸ್ಪತ್ರೆ ಬಡ ಹೆಣ್ಣು ಮಕ್ಕಳ ಪಾಲಿಗೆ ಇದ್ದು ಇಲ್ಲದಂತಾಗಿದೆ . ಹೆರಿಗೆಗೆ ಬರುವ ಬಡವರಿಗೆ ನೂರೊಂದು ನೆಪ ಹೇಳಿ ಖಾಸಗಿ ಆಸ್ಪತ್ರೆಗಳ ರವಾನೆ ಮಾಡುವ ದಂದೆ ಜೊತೆಗೆ ಹೆರಿಗೆ ವಿಭಾಗದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಜೊತೆಗೆ ಮಕ್ಕಳ ವಾರ್ಡ್‌ಗಳಲ್ಲಿ ಸ್ಟೀನ್‌ಗಳಿಲ್ಲದೆ ಮಕ್ಕಳಿಗೆ ಹಾಲುಣಿಸಲು ಕಷ್ಟವಾಗುತ್ತದೆಂದು ವಿವರಿಸಿದರು . ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌ ಮಾತನಾಡಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಅನಧೀಕೃತ ಅಂಗಡಿ ಮಳಿಗೆಗಳ ಹೆಚ್ಚಾಗಿ ಹೆಚ್ಚಿನ ಬೆಲೆಗೆ ಮಾರಾಟಮಾಡುವ ಟೆಂಡರ್ ಇಲ್ಲದ ಅಮಗಡಿಗಳನ್ನು ತೆರೆವುಗೊಳಿಸಬೇಕೆಂದು ಒತ್ತಾಯ ಜೊತೆಗೆ ಮಾಡಿದರು.

ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ೧೨ ಜನರ ೫ ತಿಂಗಳ ವೇತನ ಜೊತೆಗೆ ಪಿ.ಎಪ್ ಇ , ಎಸ್ , ಐ ನೀಡದೇ ಯಾವುದೇ ಮೂಲ ಭೂತ ಸೌಕರ್ಯಗಳನ್ನು ಒದಗಿಸದೆ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಮತ್ತು ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದರು . ಮನವಿ ಸ್ವೀಕರಿಸಿದ ಮಾತನಾಡಿದ ಡಾ . ರಘುನಾಥ್‌ರೆಡ್ಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ದಲ್ಲಾಳಿಗಳ ಹವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿ ಮಳಿಗೆ ತೆರೆವುಗೊಳಿಸಿ , ಬಡ ಕಾರ್ಮಿಕರಿಗೆ ವೇತನ ಕೊಡುವ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು . ಮನವಿ ನೀಡುವಾಗ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಜಿಲ್ಲಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್ , ಐತಾಂಡಹಳ್ಳಿ ಮುನ್ನಾ , ವಕ್ಕಲೇರಿ ಹನುಮಯ್ಯ , ಯಲ್ಲಪ್ಪ , ಯಾರಂಗಟ್ಟ ಗೀರೀಶ್ , ಕುವಣ್ಣ , ಸುರೇಶ್‌ಬಾಬು , ಮಂಜುನಾಥ್ , ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು