7:30 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು