6:00 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು