1:51 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ

08/02/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.

ಕಲ್ಲಕ್ಕಿ ಗ್ರಾಮದ ನಾರಾಯಣ (೪೨) ಮೃತಪಟ್ಟ ದುರ್ದೈವಿ. ಕಲ್ಲಕ್ಕಿಯ ತೋಟವೊಂದರಲ್ಲಿ ಅಡಿಕೆ ಕುಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ತೋಟದ ಪಕ್ಕದಲ್ಲಿ ಹಾದೂ ಹೋಗಿದ್ದ  ವಿದ್ಯುತ್ ತಂತಿಯ ಮೇಲೆ ಅಡಿಕೆ ಗೊನೆ ಬಿದ್ದಿದ್ದು ಕೈಯಿಂದ ಅಡಿಕೆಗೊನೆಯನ್ನು ತೆಗೆಯಲು ಹೋಗಿ ನಾರಾಯಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಹಾಗೂ ಮೆಸ್ಕಾಂ ಜೆಇ ಪ್ರಭಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು