8:53 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಫೆ.13: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ 

09/02/2022, 11:33

ವಿಜಯನಗರ(reporterkarnataka.com) : ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಡಾ. ಸಿ.ವಿ.ರಾಮನ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು(KJVS)  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಲಿದೆ. ಆಸಕ್ತ ಪ್ರೌಢಶಾಲೆ  ವಿದ್ಯಾರ್ಥಿಗಳು ದಿನಾಂಕ  10-02-2022 ರೊಳಗೆ ಆನ್‌ಲೈನ್‌ ಅಥವಾ ಖುದ್ದಾಗಿ ನೋಂದಣಿ ಮಾಡಿಕೊಳ್ಳಬಹುದು.ಜಿಲ್ಲಾ ಮಟ್ಟದಲ್ಲಿ ಫೆಬ್ರವರಿ 13 ರ ಬೆ 11 ರಿಂದ 11 30 ಕ್ಕೆ ಆನ್‌ಲೈನ್‌ ಮೂಲಕ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಈ ಜಿಲ್ಲಾ  ಹಂತದಲ್ಲಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಜೊತೆಗೆ ಮೂವರು ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಈ ಸ್ಪರ್ಧೆಗೆ ಭಾಗವಹಿಸಿದ ಪ್ರತಿ ವಿದ್ಯಾರ್ಥಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ . ಈ ಜಿಲ್ಲಾ ಹಂತದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 20-02-2022 ರಂದು ರಾಜ್ಯ ಹಂತದಲ್ಲಿ ನಡೆಯುವ ಕ್ವಿಜ್ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ . ರಾಜ್ಯ ಹಂತದಲ್ಲಿನ ಪ್ರಥಮ ಸ್ಥಾನಕ್ಕೆ 6000 ರೂ ದ್ವಿತೀಯ ಸ್ಥಾನಕ್ಕೆ 5000 ರೂ ಹಾಗೂ ತೃತೀಯ ಸ್ಥಾನಕ್ಕೆ 4000 ರೂ ಗಳ ಕ್ಯಾಶ್ ಪ್ರೈಸ್ ಜೊತೆ ವಿಶೇಷ ಸ್ಮರಣಿಕೆ , ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು . ಈ ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ತಾಲ್ಲೂಕು ಅಥವಾ ಜಿಲ್ಲಾ KJVS ಪಧಾದಿಕಾರಿಗಳನ್ನು ಸಂಪರ್ಕ ಮಾಡಿ.ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾ ಈ ಕ್ವಿಜ್ ನ ಸಂಯೋಜಕರಾದ ಬಸವರಾಜ ಗೌಡ್ರ  (9535958192 ) ಮತ್ತು ತಾ.ಸಂ.ರಾದ  ಶ್ರೀ ನವೀನಕುಮಾರ (9449137008) ಇವರನ್ನು ಸಂಪರ್ಕ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು