9:00 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಫೆ.13: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ 

09/02/2022, 11:33

ವಿಜಯನಗರ(reporterkarnataka.com) : ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಡಾ. ಸಿ.ವಿ.ರಾಮನ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು(KJVS)  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಲಿದೆ. ಆಸಕ್ತ ಪ್ರೌಢಶಾಲೆ  ವಿದ್ಯಾರ್ಥಿಗಳು ದಿನಾಂಕ  10-02-2022 ರೊಳಗೆ ಆನ್‌ಲೈನ್‌ ಅಥವಾ ಖುದ್ದಾಗಿ ನೋಂದಣಿ ಮಾಡಿಕೊಳ್ಳಬಹುದು.ಜಿಲ್ಲಾ ಮಟ್ಟದಲ್ಲಿ ಫೆಬ್ರವರಿ 13 ರ ಬೆ 11 ರಿಂದ 11 30 ಕ್ಕೆ ಆನ್‌ಲೈನ್‌ ಮೂಲಕ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಈ ಜಿಲ್ಲಾ  ಹಂತದಲ್ಲಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಜೊತೆಗೆ ಮೂವರು ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಈ ಸ್ಪರ್ಧೆಗೆ ಭಾಗವಹಿಸಿದ ಪ್ರತಿ ವಿದ್ಯಾರ್ಥಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ . ಈ ಜಿಲ್ಲಾ ಹಂತದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 20-02-2022 ರಂದು ರಾಜ್ಯ ಹಂತದಲ್ಲಿ ನಡೆಯುವ ಕ್ವಿಜ್ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ . ರಾಜ್ಯ ಹಂತದಲ್ಲಿನ ಪ್ರಥಮ ಸ್ಥಾನಕ್ಕೆ 6000 ರೂ ದ್ವಿತೀಯ ಸ್ಥಾನಕ್ಕೆ 5000 ರೂ ಹಾಗೂ ತೃತೀಯ ಸ್ಥಾನಕ್ಕೆ 4000 ರೂ ಗಳ ಕ್ಯಾಶ್ ಪ್ರೈಸ್ ಜೊತೆ ವಿಶೇಷ ಸ್ಮರಣಿಕೆ , ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು . ಈ ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ತಾಲ್ಲೂಕು ಅಥವಾ ಜಿಲ್ಲಾ KJVS ಪಧಾದಿಕಾರಿಗಳನ್ನು ಸಂಪರ್ಕ ಮಾಡಿ.ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾ ಈ ಕ್ವಿಜ್ ನ ಸಂಯೋಜಕರಾದ ಬಸವರಾಜ ಗೌಡ್ರ  (9535958192 ) ಮತ್ತು ತಾ.ಸಂ.ರಾದ  ಶ್ರೀ ನವೀನಕುಮಾರ (9449137008) ಇವರನ್ನು ಸಂಪರ್ಕ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು