6:02 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭಗವಾನ್ ಬಾಹುಬಲಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಥಣಿ ಜೈನ ಸಮಾಜದ ಮುಖಂಡರಿಂದ ಖಂಡನೆ

10/02/2022, 15:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಶ್ವದ ಅದ್ಭುತಗಳಲ್ಲೊಂದಾದ ಶ್ರವಣಬೆಳಗೊಳದ ಏಕ ಶಿಲಾಮೂರ್ತಿ ಭಗವಾನ ಬಾಹುಬಲಿ ಸ್ವಾಮಿಯ ಬಗ್ಗೆ, ಜೈನ ಧರ್ಮದ ಬಗ್ಗೆ ಅಯೂಬ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಅಥಣಿ ಜೈನ ಸಮಾಜ ಖಂಡಿಸಿದೆ. 


ಸಮಾಜದಲ್ಲಿ ಸಾಮರಸ್ಯ ಕದಡುವ ಇಂತಹ ಹೇಳಿಕೆ ನೀಡಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಅಥಣಿ ಜೈನ ಸಮಾಜದ  ಒತ್ತಾಯಿಸಿದರು.

ಜೈನ ಸಮಾಜದ ಬುಧವಾರ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಅಥಣಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕುಮಾರ್ ಹಾಡ್ಕಾರ ಅವರಿಗೆ ದೂರು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಒಂದು ಧರ್ಮದ ಭಾವನೆಗಳ ಹಾಗೂ ನಮ್ಮ ದೇಶದ ಕೀರ್ತಿಯ ಕಳಸವಾಗಿರುವ ಗೊಮ್ಮಟೇಶನಿಗೆ ಬಟ್ಟೆ ಧರಿಸುವ ಬಗ್ಗೆ ಹೇಳಿಕೆ ನೀಡಿರುವುದು. ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ತಂದಿರುತ್ತದೆ.  ಆಯೂಬ್ ಖಾನ್ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಜೈನ ಸಮಾಜದ ಮುಖಂಡ ರಾಜು ನಾಡಗೌಡ ಮಾತನಾಡಿ, ನಮ್ಮ ಜೈನ ಧರ್ಮದ ಆರಾಧ್ಯ ದೇವರಾದ ಭಗವಾನ ಬಾಹುಬಲಿ ಸ್ವಾಮಿಯ ಕುರಿತು ಮೈಸೂರಿನ  ಅಯೂಬ್ ಖಾನ್ ಎಂಬ ಮುಸ್ಲಿಮ್ ವ್ಯಕ್ತಿ ಅವಹೇಳನಕಾರಿಯಾಗಿ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವದು ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಇಂತಹ ಘಟನೆಗಳು ಮರುಕಳಿಸಬಾರದು  ಮತ್ತು ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ನ್ಯಾಯವಾದಿ ಕಲ್ಲಪ್ಪ ವಣಜೋಳ ಮಾತನಾಡಿ ಬಾಹುಬಲಿ ಮೂರ್ತಿಗೆ  ಚಡ್ಡಿ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಅಯೂಬ್ ಖಾನ್  ವಿರುದ್ಧ  ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆತನ ವಿರುದ್ಧ  ಅಥಣಿ ಪೊಲೀಸ್ ಠಾಣೆಯಲ್ಲಿ ನೋವು ದೂರು ನೀಡಿದ್ದೇವೆ. ರಾಜ್ಯಾದ್ಯಂತ ಈ ವಿವಾದಾತ್ಮಕ ಹೇಳಿಕೆಯನ್ನು ಜೈನ ಮುಖಂಡರು ಖಂಡಿಸಿದ್ದಾರೆ.  ರಾಜ್ಯ ಸರ್ಕಾರ ಅಯೂಬ್ ಖಾನ್  ವಿರುದ್ಧ  ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.


ಈ ವೇಳೆ  ಜೈನ ಸಮಾಜದ ಮುಖಂಡರಾದ ಅರುಣ್ ಯಲಗುದ್ರಿ, ಅಮರ ದುರ್ಗಣ್ಣವರ, ದೀಪಕ್ ಕಡೋಲಿ, ಅಶೋಕ ದಾನಗೌಡರ, ಅಪ್ಪಾಸಾಬ ಪಾಟೀಲ, ಅಶೋಕ ಪಡನಾಡ, ರಾಜೇಂದ್ರ ಪಾಟೀಲ್, ಶ್ರೀಕಾಂತ್ ಅಸ್ಕಿ, ಪುಷ್ಪಕ ಪಾಟೀಲ, ವಿದ್ಯಾಧರ ಡುಮ್ಮನವರ ,  ಅಮೂಲ ಕಾಂತೆ, ರಾಘವೇಂದ್ರ ಹಳಿಂಗಳಿ, ನೇಮಿನಾಥ ನಂದಗಾವ, ಬಸಗೌಡ ಮುಗ್ಗನವರಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು