4:31 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಸೋಮವಾರದಿಂದಲೇ ಪ್ರೌಢಶಾಲೆ ಆರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

11/02/2022, 08:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲೇ ಸಭೆ ನಡೆಸಿದ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ , ಸೋಮವಾರದಿಂದ ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಕಾರಣ ಸೋಮವಾರ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ಪಿಯುಸಿ, ಡಿಗ್ರೀ ತರಗತಿ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಉಂಟಾದ ಘರ್ಷಣೆಯಿಂದಾಗಿ ಸರ್ಕಾರ 3 ದಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.ಇದೀಗ ಹೈಕೋರ್ಟ್​ ಶಿಕ್ಷಣ ಕೇಂದಗಳನ್ನು ಮುಚ್ಚದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಪುನಾರಂಭಿಸಲಾಗುವುದು ಎಂದರು.

ಇನ್ನು ನಾಳೆ ಸಂಜೆ ಎಲ್ಲಾ ಸಚಿವರ, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗುವುದು. ಬಳಿಕ ಎಲ್ಲ ಶಾಲಾ – ಕಾಲೇಜು ಆರಂಭಿಸಲು ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು