2:51 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಳಿಗಿರಿರಂಗನ ಬೆಟ್ಟ: ಕಾಡಾನೆ ದಾಳಿಗೆ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿಗೆ ಗಂಭೀರ ಗಾಯ

11/02/2022, 09:18

ಸಾಂದರ್ಭಿಕ ಚಿತ್ರ
ಚಾಮರಾಜನಗರ(reporterkarnataka.com): ಅರಣ್ಯದೊಳಗೆ ಗಸ್ತಿನಲ್ಲಿದ್ದ ಫಾರೆಸ್ಟ್‌ ವಾಚರ್ ಒಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ನಡೆದಿದೆ.

ಅರಣ್ಯ ವೀಕ್ಷಕ ಜಡೆಯಾ(58) ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಇವರೊಟ್ಟಿಗೆ ಇದ್ದ ಮತ್ತಿಬ್ಬರು ಓಡಿ ಹೋಗಿ ದಾಳಿಯಿಂದ ಪಾರಾಗಿದ್ದಾರೆ. ಪುಣಜನೂರು ಅರಣ್ಯ ವಲಯದ ಕರಿಕಲ್ಲು ಮುಂಟಿ ಎಂಬಲ್ಲಿ ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದ್ದು,ಜಡೆಯಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಗೆ ಅರಣ್ಯಾಧಿಕಾರಿಗಳು ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು