3:14 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು