1:35 AM Monday16 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು