11:50 PM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು