7:17 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು