11:43 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು