11:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು