10:07 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು