2:15 PM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಗೋವಾ ವಿಧಾನಸಭೆ ಚುನಾವಣೆ: ಬಿಜೆಪಿ ಪರ ಶಾಸಕ ವೇದವ್ಯಾಸ ಕಾಮತ್ ಬಿರುಸಿನ ಪ್ರಚಾರ

12/02/2022, 18:41

ಪಣಜಿ(reporterkarnataka.com): ಗೋವಾ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕ‌ ಡಿ. ವೇದವ್ಯಾಸ ಕಾಮತ್ ಅವರು ಅಂತಿಮ ಹಂತದ ಪ್ರಚಾರ ನಡೆಸಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು. 

ಈ ಕುರಿತು ಮಾತನಾಡಿದ‌ ಶಾಸಕ ಕಾಮತ್, ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲಿದೆ. ಗೋವಾ ರಾಜ್ಯದಲ್ಲಿ ಅಭಿವೃದ್ಧಿಯ ಚಿಂತನೆಯಿಂದ ಆಡಳಿತ ನಡೆಸಿದ ಬಿಜೆಪಿಯ ವೈಖರಿಯನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಸಮರ್ಥ ನಾಯಕತ್ವ, ಅಭಿವೃದ್ಧಿಯನ್ನು ಮುಂದಿಟ್ಟು ಗೋಲ್ಡನ್ ಗೋವಾ ನಿರ್ಮಾಣದ ಕನಸಿನೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೇರಲಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಣಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಟಾನಾಸಿಯೊ ಮೊನ್ಸೆರಾಟೆ, ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಮುಖಂಡರಾದ ಸಂಜಯ್ ಪ್ರಭು, ವಸಂತ್ ಜೆ ಪೂಜಾರಿ, ಪಣಜಿ ಕ್ಷೇತ್ರದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು