11:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ: ಮಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ

12/02/2022, 21:33

ಮಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ ಅವಧಿಗೆ ಸಮ್ಮಿಶ್ರ ಸರಕಾರ ರಚನೆಗೊಳ್ಳುವ ಸಾಧ್ಯತೆಯಿದೆ. ಆ ಸಂದರ್ಭ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮ್ಮ ಬಳಿ ಬರಬಹುದು. ಆ ವೇಳೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜಾತ್ಯತೀತ ಪಕ್ಷಕ್ಕೆ ನಮ್ಮ ಒಲವು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಅವರು ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದೇಶದ ಇಂದಿನ ರಾಜಕೀಯ ಸ್ಥಿತಿಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಬಿಟ್ಟು ದೇಶ ಆಳುವುದು ಕಷ್ಟ ಇದೆ. ಉತ್ತರ ಪ್ರದೇಶ ಸಹಿತ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಜಕೀಯ ಬೆಳವಣಿಗೆ ಉಂಟಾಗಲಿದೆ. ಅದು ಏನು ಎಂಬುದನ್ನು ಕಾದುನೋಡಿ ಎಂದು ಮಾಜಿ ಪ್ರಧಾನಿ ಹೇಳಿದರು.

ಜೆಡಿಎಸ್ ಪಕ್ಷವನ್ನು ಮತ್ತೆ ಬಲಪಡಿಸಲು ರಾಜ್ಯಾದ್ಯಂತ ಪ್ರವಾಸ ನಡೆಸುತ್ತೇನೆ. ಪ್ರತಿ ತಿಂಗಳೂ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ನನ್ನ ಅನುಭವದ ಆಧಾರದಲ್ಲಿ ಮುಂದಿನ ಒಂದು ವರ್ಷದಲ್ಲಿ ಪಕ್ಷವನ್ನು ಕಟ್ಟುವ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ಕುಮಾರಸ್ವಾಮಿ ಅವರು ಈಗಾಗಲೇ ಪಂಚರತ್ನ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. ಮಂಗಳೂರಿನಿಂದ ಪಕ್ಷ ಸಂಘಟನೆ ಆರಂಭಿಸಿ ರಾಜ್ಯಾದ್ಯಂತ ವಿಸ್ತರಿಸುತ್ತೇವೆ ಎಂದರು.

ದೇಶದಲ್ಲಿ ಜಾತ್ಯತೀತ ಪಕ್ಷಗಳನ್ನು ಒಂದುಗೂಡಿಸಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಎರಡು ಬಾರಿ ಪ್ರಯತ್ನ ನಡೆಸಿದ್ದೆ. ಆದರೆ, ಆ ಪ್ರಯತ್ನ ಸಫಲವಾಗಲಿಲ್ಲ. ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್ ಎಂದು ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಹೇಳಿದ ಪರಿಣಾಮ ನಾವು ಹಾಸನ ವಿಧಾನಸಭಾ ಕ್ಷೇತ್ರ ಕಳೆದುಕೊಳ್ಳಬೇಕಾಯಿತು. ರಾಜ್ಯದಲ್ಲಿ ಜೆಡಿಎಸ್‌ಗೆ ೩೦ಕ್ಕೂ ಅಧಿಕ ಸ್ಥಾನ ನಷ್ಟವಾಯಿತು. ಅದರ ಪರಿಣಾಮವನ್ನು ಕಾಂಗ್ರೆಸ್ ಈಗ ಅನುಭವಿಸುತ್ತಿದೆ. 

ರಾಜ್ಯದಲ್ಲಿ ಮುಂದಿನ ಅವಧಿಗೆ ಸಮ್ಮಿಶ್ರ ಸರಕಾರ ರಚನೆಗೊಳ್ಳುವ ಸಾಧ್ಯತೆಯಿದೆ. ಆ ಸಂದರ್ಭ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ನಮ್ಮ ಬಳಿ ಬರಬಹುದು. ಆ ವೇಳೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜಾತ್ಯತೀತ ಪಕ್ಷಕ್ಕೆ ನಮ್ಮ ಒಲವು ಎಂದು ಅವರು ಹೇಳಿದರು.

ಹಿಜಾಬ್ ವಿವಾದ ಹೇಗೆ, ಎಲ್ಲಿಂದ, ಯಾಕೆ ಹುಟ್ಟಿಕೊಂಡಿತು,ಇದಕ್ಕೆ ಮೂಲ ಕಾರಣ ಯಾರು ಎಂಬ ಬಗ್ಗೆ ಗೊತ್ತಿದೆ. ಇದರ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಮತ್ತೊಂದು ಸಣ್ಣ ರಾಜಕೀಯ ಪಕ್ಷ ಇದೆ. ಕರಾವಳಿಯಿಂದ ಚಿಕ್ಕಮಗಳೂರುವರೆಗೆ ಸಮಸ್ಯೆಗಳನ್ನು ಉದ್ಭವಿಸುವ ಕೆಲ ಶಕ್ತಿಗಳಿವೆ. ನಾನು ಎಂದೂ ಧರ್ಮದ ಆಧಾರದಲ್ಲಿ ವೈಷಮ್ಯ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿಲ್ಲ. ಪ್ರಸ್ತುತ ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ. ಕರಾವಳಿಯಲ್ಲಿ ಇಂತಹ ಪ್ರಯತ್ನ ನಡೆಯುತ್ತಿರುವುದು ದುರಂತ ಎಂದು ದೇವೇಗೌಡ ಹೇಳಿದರು.

ಜಾತ್ಯತೀತ ಪಕ್ಷಗಳು ಒಂದಾಗದಿರುವುದು ನಮ್ಮ ಹಿನ್ನಡೆಗೆ ಕಾರಣ. ಬಿಜೆಪಿಯಲ್ಲಿ ನರೇಂದ್ರ ಮೋದಿ ಒಬ್ಬರೇ ಎಲ್ಲ ಕಡೆ ತೆರಳುತ್ತಿದ್ದಾರೆ. ಮೋದಿ ಹೊರತುಪಡಿಸಿ ಬಿಜೆಪಿಗೆ ಶಕ್ತಿ ತುಂಬುವ ಬೇರೆ ವ್ಯಕ್ತಿ ಬಿಜೆಪಿಯಲ್ಲಿಲ್ಲ. ಮೋದಿ ಅವರಿಗೆ ವಿಲ್ ಪವರ್ ಇದೆ. ಉತ್ತರಪ್ರದೇಶ ಸಹಿತ ಪಂಚರಾಜ್ಯಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮೋದಿ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ನಾನು ಮೋದಿ ಅವರನ್ನು ಭೇಟಿ ಮಾಡಲು ತೆರಳಿದಾಗ ನನ್ನನ್ನು ಕೈಹಿಡಿದು ಕರೆದುಕೊಂಡು ಹೋದರು. ಚುನಾವಣೆ ಸಂದರ್ಭ ನಮ್ಮಿಬ್ಬರ ನಡುವಿನ ಪಂಥವನ್ನು ಮರೆತು ನೀವು ಹಿರಿಯರು ನಮಗೆ ಸಲಹೆ ನೀಡಬೇಕು ಎಂದು ನನ್ನ ಎಲ್ಲ ಮಾತು ಆಲಿಸಿದರು ಎಂದು ದೇವೇಗೌಡ ಹೇಳಿದರು.

ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ರಾಮನಗರ ಜಿಲ್ಲೆ ಬಿಟ್ಟು ಕುಮಾರಸ್ವಾಮಿ ಅವರು ಬೇರೆಲ್ಲೂ ಹೋಗುವುದಿಲ್ಲ. ಸಿಎಂ ಇಬ್ರಾಹಿಂ ಅವರು ನನ್ನ ಜತೆಯೇ ಇದ್ದವರು. ಈಗ ಕಾಂಗ್ರೆಸ್ ಬಿಡುತ್ತೇನೆ ಎಂದು ಹೇಳಿರುವುದನ್ನು ಗಮನಿಸಿದ್ದೇನೆ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಇಬ್ರಾಹಿಂ ನಮ್ಮ ಪಕ್ಷಕ್ಕೆ ಬರುವುದಾದರೆ ನಿರಾಕರಣೆ ಮಾಡುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ದೇವೇಗೌಡರು ಪ್ರತಿಕ್ರಿಯಿಸಿದರು.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಜೆಡಿಎಸ್ ಮುಖಂಡ ಎಂಬಿ ಸದಾಶಿವ, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುಖಂಡರಾದ ಮಹಮ್ಮದ್ ಕುಂಞ್ಞಿ, ಅಕ್ಷಿತ್ ಸುವರ್ಣ, ಸುಶಿಲ್ ನೊರೊನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು