10:45 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮನವಿಗಿಲ್ಲ ಸಿಎಂ ಪುರಸ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ರೋಹಿಣಿ ಸಿಂಧೂರಿ ನೇಮಕ

06/06/2021, 16:46

ಮಂಗಳೂರು(reporterkarnataka news): ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.ವರ್ಗಾವಣೆಗೆ ತಡೆ ನೀಡಬೇಕೆಂಬ ಸಿಂಧೂರಿ ಅವರ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುರಸ್ಕರಿಸಿಲ್ಲ.

ಸದಾ ವಿವಾದದ ಮೂಲಕ ಸುದ್ದಿಯಾಗುತ್ತಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜಕಾರಣಿಗಳು ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳು ಅಸಮಾಧಾನಗೊಂಡಿದ್ದರು. ಅವರ ವರ್ಗಾವಣೆಗೆ ಭಾರಿ ಪ್ರಯತ್ನವನ್ನು ಕೂಡ ನಡೆಸಿದ್ದರು. ಈ ನಡುವೆ ಜಿಲ್ಲಾಧಿಕಾರಿ ಸಿಂಧೂರಿ ಹಾಗೂ ಮೈಸೂರು ಮಹಾನಗರಪಾಲಿಕೆ ಕಮಿಷನರ್ ಶಿಲ್ಪಾ ನಾಗ್ ನಡುವೆ ಕಿತ್ತಾಟ ಆರಂಭವಾಯಿತು. ಶಿಲ್ಪಾ ನಾಗ್ ಅವರು ತನ್ನ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದರು. ಈ ನಡುವೆ ಇಬ್ಬರೂ ಅಧಿಕಾರಿಗಳ ವರ್ಗಾವಣೆ ನಡೆದಿದೆ.

ಇದೀಗ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಗೆ ನೇಮಿಸಲಾಗಿದೆ. ಸರಳ ಹಾಗೂ ಮೃದು ಸ್ವಭಾವದ ಪ್ರಾಮಾಣಿಕ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆಯ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು