9:56 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು: ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್

14/02/2022, 21:55

ಬೆಂಗಳೂರು(reporterkarnataka.com): ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನು ಮುಲ್ಲಾ ಎಂದು ಕರೆದರೆ ನಾನು ಖುಷಿಪಡುತ್ತೇನೆ. ಯಾಕೆಂದರೆ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಹೇಳಿದರು.

ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹತ್ತಾರು ಮುಲ್ಲಾಗಳು/ಮೌಲ್ವಿಗಳು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗ ಇತಿಹಾಸಕ್ಕೆ ಬರೋಣಾ. ಈಗೇನಾದರೂ ಸಾವರ್ಕರ್ ಬದುಕಿದ್ದರೆ ಮೈಸೂರು ರೈಲಿಗೆ ಟಿಪ್ಪು ಎಕ್ಸ್ ಪ್ರೆಸ್ ಎಂದು ಹೆಸರು ಇಡಬೇಕೆಂದು ನನ್ನಂತೆ ಅವರೂ ಪ್ರತಿಪಾದಿಸುತ್ತಿದ್ದರು. ಈ ದೇಶಕ್ಕೆ ಬ್ರಿಟೀಷರಿಂದ ಅಪಾಯ ಇದೆ ಎಂಬುದನ್ನು ಮೊದಲು ಅರಿತವರೇ ಹೈದರಾಲಿ ಮತ್ತು ಟಿಪ್ಪು” ಎಂದು ಸಾವರ್ಕರ್ ಹೇಳುತ್ತಾರೆ. (ಪುಸ್ತಕ : ದಿ ಇಂಡಿಯನ್ ವಾರ್ ಆಫ್ ಇಂಡಿಪೆಂಡೆನ್ಸ್ 1857 ಲೇಖಕರು : ಸಾವರ್ಕರ್) ಅದೇ ಪುಸ್ತಕದಲ್ಲಿ ಸಾವರ್ಕಲ್ ಮುಲ್ಲಾಗಳ ಬಗ್ಗೆಯೂ ಬರೆಯುತ್ತಾರೆ. “ಮುಲ್ಲಾಗಳು ಬೋಧಿಸಿದ, ಬ್ರಾಹ್ಮಣರು ಆಶೀರ್ವಾದಿಸಿದ ದೆಹಲಿಯ ಮಸೀದಿಗಳು ಮತ್ತು ಬನಾರಸ್ ದೇವಸ್ಥಾನಗಳಿಂದ ಪ್ರಾರ್ಥನೆ ಮತ್ತು ತತ್ವಗಳು ಯಾವುದು ? ಅದೇ ಸ್ವಧರ್ಮ ಮತ್ತು ಸ್ವರಾಜ್” ಎಂದು ಬರೆಯುತ್ತಾರೆ.

ನಾನೇನೋ ಉಳ್ಳಾಲದ ಮುಲ್ಲಾ. ಬುದ್ಧಿವಂತ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಸಾವರ್ಕರ್ ಅವರನ್ನು ಒಪ್ಪುತ್ತಾರೋ ಇಲ್ಲವೋ ಹೇಳಲಿ ಎಂದು ಖಾದರ್ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು