1:41 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ರೋಹಿಣಿ ಸಿಂಧೂರಿ ವರ್ಗಾವಣೆ: ಮುಮ್ಮೇಳದಲ್ಲಿ ಸಚಿವರು, ಸಂಸದರು, ಶಾಸಕರು; ಹಿಮ್ಮೇಳದಲ್ಲಿ ಸರಕಾರಿ ಅಧಿಕಾರಿಗಳು !!

06/06/2021, 18:05

ಶ್ರದ್ಧಾ ಎಸ್. ಪಾಟೀಲ್ ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ಅವರು ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಪ್ರಯತ್ನಗಳು ನಡೆಯುತ್ತಲೇ ಇತ್ತು. ಇದಕ್ಕೆ ಓರ್ವ ಸಂಸದ, ಉಸ್ತುವಾರಿ ಸಚಿವರು, ಅರ್ಧ ಡಜನಿಗೂ ಅಧಿಕ ಶಾಸಕರು, 5 ಡಜನಿಗೂ ಹೆಚ್ಚು ಕಾರ್ಪೊರೇಟರ್ ಗಳು ಸರಕಾರದ ಮೇಲೆ ಸದಾ ಒತ್ತಡ ಹೇರಿದ್ದರು. ಇದರ ಜತೆಗೆ ಜಿಲ್ಲೆಯ ಹಲವು ಮಂದಿ ಅಧಿಕಾರಿಗಳು ಕೂಡ ಹಿಮ್ಮೇಳದಲ್ಲಿ ಸಾಥ್ ನೀಡಿದ್ದರು !

ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ನಡೆದಿದೆ. ಧಾರ್ಮಿಕ ದತ್ತಿ ಇಲಾಖೆಗೆ ಹೊಸ ಆಯುಕ್ತರಾಗಿ ಅವರನ್ನು ನೇಮಿಸಲಾಗಿದೆ. ಆದರೆ ವಿಶೇಷವೆಂದರೆ ರೋಹಿಣಿ ಸಿಂಧೂರಿ ಅವರು ಎಲ್ಲಿ ಹೋದರೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಮಂಗಳೂರಿನಲ್ಲಿ ಪ್ರೊಬೇಷನರಿ ಎಸಿಯಾಗಿದ್ದಾಗಲೇ ಕಟೀಲು ದೇವಳ ವಿಷಯದಲ್ಲಿ ಸದ್ದು ಮಾಡಿದ್ದರು. ಮೌನವಾಗಿ ಕೆಲಸ ಮಾಡುವ ಛಾತಿಯೇ ಅವರಲಿಲ್ಲ. ಒಂದು ರೀತಿಯಲ್ಲಿ ವಿವಾದವನ್ನು ಮೈಗೆ ಎಳೆದುಕೊಳ್ಳುತ್ತಿದ್ದ ಅಧಿಕಾರಿ ಅವರು.

ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗಲೂ ಅಲ್ಲಿನ ಸ್ಥಳೀಯ ಮಾಂಡಲಿಕರು ಜತೆ ಕಾದಾಡಿದ್ದರು. ಎಚ್.ಡಿ. ರೇವಣ್ಣ ಮತ್ತು ಸಿಂಧೂರಿ ನಡುವೆ ಸದಾ ಜಟಾಪಟಿ ನಡೆಯುತ್ತಲೇ ಇತ್ತು. ಶಾಸಕ ಎ. ಮಂಜು ಅವರು ರೋಹಿಣಿ ಸಿಂಧೂರಿ ಕಾಲ ಮೇಲೆ ಕಾಲು ಹಾಕಿ ಕೂರುತ್ತಾರೆ ಎಂದು ಆಗಾಗ ದೂರುತ್ತಿದ್ದರು.

ಓರ್ವ ಮಹಿಳಾ ಐಎಎಸ್ ಅಧಿಕಾರಿ ಕಾಲ ಮೇಲೆ ಕಾಲು ಹಾಕಿ ಕೂರುವುದನ್ನು ಒಪ್ಪದ ಮನಸ್ಥಿತಿ, ಒಬ್ಬ ಸಾಮಾನ್ಯ ಮಹಿಳೆ ಕಾಲ ಮೇಲೆ ಕಾಲಿಕ್ಕಿದರೆ ಸಹಿಸಿತೇ ಎಂಬ ಪ್ರಶ್ನೆ ಉದ್ಬವಿಸುತ್ತದೆ

ರಾಜಕಾರಣಿಗಳದ್ದು ಸದಾ ದೂರು. ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಎನ್. ಮಹೇಶ್ ಅಜ್ಞಾಪಿಸುತ್ತಾರೆ. ಸಂಸದ ಪ್ರತಾಪ ಸಿಂಹ ಅವರು ಸ್ವಿಮ್ಮಿಂಗ್ ಫೂಲ್ ತಕರಾರು ಎತ್ತುತಾರೆ. ಇನ್ನು ಮೈಸೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ದೂರು ಪ್ರತಿದಿನ ಬೆಳಗಾದರೆ ಇರುತ್ತಿತ್ತು. ಒಟ್ಟಿನಲ್ಲಿ ರೋಹಿಣಿ ಸಿಂಧೂರಿ ವರ್ಗಾಣೆ ಹಿಂದೆ ಬಹಳಷ್ಟು ಪುರುಷ ಶಕ್ತಿಗಳು ಹೋರಾಟ ನಡೆಸಿದ್ದಾರೆ. ಏನಿದ್ದರೂ ಆಕೆ ಗಟ್ಟಿಗಿತ್ತಿ ಎಂದು ರೋಹಿಣಿ ಸಿಂಧೂರಿ ವರ್ಗಾವಣೆಗೆ ವಿರೋಧಿಸಿದ ಮೈಸೂರಿನ ಜನತೆ ಹೇಳಿಕೊಳ್ಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು