9:39 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ರೋಹಿಣಿ ಸಿಂಧೂರಿ ವರ್ಗಾವಣೆ: ಮುಮ್ಮೇಳದಲ್ಲಿ ಸಚಿವರು, ಸಂಸದರು, ಶಾಸಕರು; ಹಿಮ್ಮೇಳದಲ್ಲಿ ಸರಕಾರಿ ಅಧಿಕಾರಿಗಳು !!

06/06/2021, 18:05

ಶ್ರದ್ಧಾ ಎಸ್. ಪಾಟೀಲ್ ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ಅವರು ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಪ್ರಯತ್ನಗಳು ನಡೆಯುತ್ತಲೇ ಇತ್ತು. ಇದಕ್ಕೆ ಓರ್ವ ಸಂಸದ, ಉಸ್ತುವಾರಿ ಸಚಿವರು, ಅರ್ಧ ಡಜನಿಗೂ ಅಧಿಕ ಶಾಸಕರು, 5 ಡಜನಿಗೂ ಹೆಚ್ಚು ಕಾರ್ಪೊರೇಟರ್ ಗಳು ಸರಕಾರದ ಮೇಲೆ ಸದಾ ಒತ್ತಡ ಹೇರಿದ್ದರು. ಇದರ ಜತೆಗೆ ಜಿಲ್ಲೆಯ ಹಲವು ಮಂದಿ ಅಧಿಕಾರಿಗಳು ಕೂಡ ಹಿಮ್ಮೇಳದಲ್ಲಿ ಸಾಥ್ ನೀಡಿದ್ದರು !

ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ನಡೆದಿದೆ. ಧಾರ್ಮಿಕ ದತ್ತಿ ಇಲಾಖೆಗೆ ಹೊಸ ಆಯುಕ್ತರಾಗಿ ಅವರನ್ನು ನೇಮಿಸಲಾಗಿದೆ. ಆದರೆ ವಿಶೇಷವೆಂದರೆ ರೋಹಿಣಿ ಸಿಂಧೂರಿ ಅವರು ಎಲ್ಲಿ ಹೋದರೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಮಂಗಳೂರಿನಲ್ಲಿ ಪ್ರೊಬೇಷನರಿ ಎಸಿಯಾಗಿದ್ದಾಗಲೇ ಕಟೀಲು ದೇವಳ ವಿಷಯದಲ್ಲಿ ಸದ್ದು ಮಾಡಿದ್ದರು. ಮೌನವಾಗಿ ಕೆಲಸ ಮಾಡುವ ಛಾತಿಯೇ ಅವರಲಿಲ್ಲ. ಒಂದು ರೀತಿಯಲ್ಲಿ ವಿವಾದವನ್ನು ಮೈಗೆ ಎಳೆದುಕೊಳ್ಳುತ್ತಿದ್ದ ಅಧಿಕಾರಿ ಅವರು.

ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗಲೂ ಅಲ್ಲಿನ ಸ್ಥಳೀಯ ಮಾಂಡಲಿಕರು ಜತೆ ಕಾದಾಡಿದ್ದರು. ಎಚ್.ಡಿ. ರೇವಣ್ಣ ಮತ್ತು ಸಿಂಧೂರಿ ನಡುವೆ ಸದಾ ಜಟಾಪಟಿ ನಡೆಯುತ್ತಲೇ ಇತ್ತು. ಶಾಸಕ ಎ. ಮಂಜು ಅವರು ರೋಹಿಣಿ ಸಿಂಧೂರಿ ಕಾಲ ಮೇಲೆ ಕಾಲು ಹಾಕಿ ಕೂರುತ್ತಾರೆ ಎಂದು ಆಗಾಗ ದೂರುತ್ತಿದ್ದರು.

ಓರ್ವ ಮಹಿಳಾ ಐಎಎಸ್ ಅಧಿಕಾರಿ ಕಾಲ ಮೇಲೆ ಕಾಲು ಹಾಕಿ ಕೂರುವುದನ್ನು ಒಪ್ಪದ ಮನಸ್ಥಿತಿ, ಒಬ್ಬ ಸಾಮಾನ್ಯ ಮಹಿಳೆ ಕಾಲ ಮೇಲೆ ಕಾಲಿಕ್ಕಿದರೆ ಸಹಿಸಿತೇ ಎಂಬ ಪ್ರಶ್ನೆ ಉದ್ಬವಿಸುತ್ತದೆ

ರಾಜಕಾರಣಿಗಳದ್ದು ಸದಾ ದೂರು. ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಎನ್. ಮಹೇಶ್ ಅಜ್ಞಾಪಿಸುತ್ತಾರೆ. ಸಂಸದ ಪ್ರತಾಪ ಸಿಂಹ ಅವರು ಸ್ವಿಮ್ಮಿಂಗ್ ಫೂಲ್ ತಕರಾರು ಎತ್ತುತಾರೆ. ಇನ್ನು ಮೈಸೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ದೂರು ಪ್ರತಿದಿನ ಬೆಳಗಾದರೆ ಇರುತ್ತಿತ್ತು. ಒಟ್ಟಿನಲ್ಲಿ ರೋಹಿಣಿ ಸಿಂಧೂರಿ ವರ್ಗಾಣೆ ಹಿಂದೆ ಬಹಳಷ್ಟು ಪುರುಷ ಶಕ್ತಿಗಳು ಹೋರಾಟ ನಡೆಸಿದ್ದಾರೆ. ಏನಿದ್ದರೂ ಆಕೆ ಗಟ್ಟಿಗಿತ್ತಿ ಎಂದು ರೋಹಿಣಿ ಸಿಂಧೂರಿ ವರ್ಗಾವಣೆಗೆ ವಿರೋಧಿಸಿದ ಮೈಸೂರಿನ ಜನತೆ ಹೇಳಿಕೊಳ್ಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು