7:13 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಬಾಗಲಕೋಟೆಯ ಉರ್ದು ವಿಭಾಗದಲ್ಲಿ ಇಡೀ ಕ್ಲಾಸ್​ಗೆ ಒಬ್ಬಳೇ ವಿದ್ಯಾರ್ಥಿನಿ..!

15/02/2022, 22:19

ಬಾಗಲಕೋಟೆ(reporterkarnataka.com): ಹಿಜಾಬ್ ವಿವಾದ ಬಿಸಿ ಇಡೀ ರಾಜ್ಯಕ್ಕೆ ಹಬ್ಬಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಬಾಗಲಕೊಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಹುಬ್ಬೇರಿಸುವಂತೆ ಮಾಡಿದೆ. ಇಲ್ಲಿನ ಉರ್ದು ವಿಭಾಗದ 10ನೇ ತರಗತಿಯ 19 ವಿದ್ಯಾರ್ಥಿಗಳ ಪೈಕಿ ಒಬ್ಬಳು ಮಾತ್ರ ಹಾಜರಾಗಿದ್ದಾಳೆ.

ಇಡೀ ಕ್ಲಾಸ್ ನಲ್ಲಿ ಒಬ್ಬಳೇ ಒಬ್ಬಳು ವಿದ್ಯಾರ್ಥಿನಿ ತರಗತಿಗೆ ಹಾಜರಾಗಿದ್ದು, ಶಿಕ್ಷಕ ಶಿಕ್ಷಕಿಯರು ಇವಳಿಗೆ ಪಾಠ ಮಾಡುತ್ತಿದ್ದಾರೆ‌. ಒಟ್ಟು 19 ಜನ ವಿದ್ಯಾರ್ಥಿನಿಯರಿದ್ದು ಒಬ್ಬಳನ್ನು ಬಿಟ್ಟು ಎಲ್ಲರೂ ಗೈರಾಗಿದ್ದಾರೆ‌.

ಇನ್ನು ಶಾಲೆಗೆ ಬಂದ ಏಕೈಕ ವಿದ್ಯಾರ್ಥಿನಿ ಜಬೀನ್ ಮಕಾಂದಾರ, “ತರಗತಿಗೆ ನಾನು ಒಬ್ಬಳೇ ಬಂದಿದ್ದೇನೆ, ನನ್ನ ಸ್ನೇಹಿತೆಯರು ಯಾರೂ ಬಂದಿಲ್ಲ. ಇದು ಬೇಸರ ತರಿಸಿದೆ‌. ಯಾವುದೇ ಭಯ ಬೇಡ ಕ್ಲಾಸ್ ಗೆ ಬನ್ನಿ” ಅಂತ ಆಕೆಯ ಸಹಪಾಠಿಗಳಿಗೆ ಮನವಿ ಮಾಡಿದ್ದಾರೆ.

ಮನೆಯಿಂದ ಹಿಜಾಬ್ ಧರಿಸಿಕೊಂಡು ಬರೋದು ಪುನಃ ಶಾಲೆಯಲ್ಲಿ ಅದನ್ನು ತೆಗೆಯೋದು ಈ ಎಲ್ಲ ಮುಜುಗರ ಯಾಕೆ ಅಂತ ವಿದ್ಯಾರ್ಥಿನಿಯರು ಶಾಲೆಗೆ ಹೋಗದೆ ಇರೋದೆ ಒಳ್ಳೆಯದು ಅಂತ ವಿದ್ಯಾರ್ಥಿನಿಯರು, ಪೋಷಕರು ನಿರ್ಧರಿಸಿದ್ದಾರೆ‌ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು