1:18 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಬಾಗಲಕೋಟೆಯ ಉರ್ದು ವಿಭಾಗದಲ್ಲಿ ಇಡೀ ಕ್ಲಾಸ್​ಗೆ ಒಬ್ಬಳೇ ವಿದ್ಯಾರ್ಥಿನಿ..!

15/02/2022, 22:19

ಬಾಗಲಕೋಟೆ(reporterkarnataka.com): ಹಿಜಾಬ್ ವಿವಾದ ಬಿಸಿ ಇಡೀ ರಾಜ್ಯಕ್ಕೆ ಹಬ್ಬಿದ್ದು, ಇದಕ್ಕೆ ಸಾಕ್ಷಿ ಎನ್ನುವಂತೆ ಬಾಗಲಕೊಟೆಯ ಸರಕಾರಿ ಬಾಲಕಿಯರ ಪ್ರೌಢಶಾಲೆ ಹುಬ್ಬೇರಿಸುವಂತೆ ಮಾಡಿದೆ. ಇಲ್ಲಿನ ಉರ್ದು ವಿಭಾಗದ 10ನೇ ತರಗತಿಯ 19 ವಿದ್ಯಾರ್ಥಿಗಳ ಪೈಕಿ ಒಬ್ಬಳು ಮಾತ್ರ ಹಾಜರಾಗಿದ್ದಾಳೆ.

ಇಡೀ ಕ್ಲಾಸ್ ನಲ್ಲಿ ಒಬ್ಬಳೇ ಒಬ್ಬಳು ವಿದ್ಯಾರ್ಥಿನಿ ತರಗತಿಗೆ ಹಾಜರಾಗಿದ್ದು, ಶಿಕ್ಷಕ ಶಿಕ್ಷಕಿಯರು ಇವಳಿಗೆ ಪಾಠ ಮಾಡುತ್ತಿದ್ದಾರೆ‌. ಒಟ್ಟು 19 ಜನ ವಿದ್ಯಾರ್ಥಿನಿಯರಿದ್ದು ಒಬ್ಬಳನ್ನು ಬಿಟ್ಟು ಎಲ್ಲರೂ ಗೈರಾಗಿದ್ದಾರೆ‌.

ಇನ್ನು ಶಾಲೆಗೆ ಬಂದ ಏಕೈಕ ವಿದ್ಯಾರ್ಥಿನಿ ಜಬೀನ್ ಮಕಾಂದಾರ, “ತರಗತಿಗೆ ನಾನು ಒಬ್ಬಳೇ ಬಂದಿದ್ದೇನೆ, ನನ್ನ ಸ್ನೇಹಿತೆಯರು ಯಾರೂ ಬಂದಿಲ್ಲ. ಇದು ಬೇಸರ ತರಿಸಿದೆ‌. ಯಾವುದೇ ಭಯ ಬೇಡ ಕ್ಲಾಸ್ ಗೆ ಬನ್ನಿ” ಅಂತ ಆಕೆಯ ಸಹಪಾಠಿಗಳಿಗೆ ಮನವಿ ಮಾಡಿದ್ದಾರೆ.

ಮನೆಯಿಂದ ಹಿಜಾಬ್ ಧರಿಸಿಕೊಂಡು ಬರೋದು ಪುನಃ ಶಾಲೆಯಲ್ಲಿ ಅದನ್ನು ತೆಗೆಯೋದು ಈ ಎಲ್ಲ ಮುಜುಗರ ಯಾಕೆ ಅಂತ ವಿದ್ಯಾರ್ಥಿನಿಯರು ಶಾಲೆಗೆ ಹೋಗದೆ ಇರೋದೆ ಒಳ್ಳೆಯದು ಅಂತ ವಿದ್ಯಾರ್ಥಿನಿಯರು, ಪೋಷಕರು ನಿರ್ಧರಿಸಿದ್ದಾರೆ‌ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು