2:42 AM Tuesday7 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಕಾಂಗ್ರೆಸ್ ನಿಂದ ಭಾರೀ ಪ್ರತಿಭಟನೆ, ಮಾನವ ಸರಪಳಿ

17/02/2022, 11:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮಡುಗಿನ ಬಸಪ್ಪ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ವಾಲ್ಮೀಕಿ ವೃತ್ತದಿಂದ ಪ್ರತಿಭಟನ ಆರಂಭಿಸಿ ನೆಹರು ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಇಓ ಮೇಲೆ ಹಲ್ಲೆ ನಡೆಸಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಘೊಷಣೆಗಳನ್ನು ಕೂಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೌಳೂರು ಪ್ರಕಾಶ ಮಾತನಾಡಿ ಸರ್ಕಾರಿ ಅಧಿಕಾರಿಯು ಕರ್ತವ್ಯ ನಿರ್ವಹಿಸುವಾಗ ಹಲ್ಲೆ ನಡೆಸಿದ್ದಾರೆ, ಇದು ಬಿಜೆಪಿ ಕಾರ್ಯಕರ್ತರ ಗುಂಡಾಗಿರಿ, ಒಬ್ಬ ಅಧಿಕಾರಿ ಮೇಲೆ ಹಲ್ಲೆ ನಡೆಸಿದರೆ, ಜನಸಾಮಾನ್ಯರ ಗತಿಯೇನು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ ಎಂದು ಬಿಜೆಪಿ ಕಾರ್ಯಕರ್ತರು ಗುಂಡಾಗಿರಿ ಮಾಡುತ್ತಿದ್ದಾರೆ. ಇಂತಹ ಗುಂಡಾಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಕ್ರೋಶ ವ್ಯಕ್ತ ಪಡಿಸಿದರು.

ನಂತರ ತಾಲ್ಲೂಕು ಕಚೇರಿ ಬಳಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಶಂಕರ್, ಜಿಪಂ ಮಾಜಿ ಸದಸ್ಯ ಪ್ರಕಾಶ ಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಸದಸ್ಯರಾದ ರಮೇಶ್ ಗೌಡ, ವೈ. ಪ್ರಕಾಶ್, ರಾಘವೇಂದ್ರ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರಾದ ರವಿಕುಮಾರ್, ಡಿ.ಕೆ. ಕಾಟಯ್ಯ, ಸಿ.ಟಿ. ಶ್ರೀನಿವಾಸ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು