3:52 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

17/02/2022, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ತೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ. 

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ-ಮುಂಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ. ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕು’

ಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಇತ್ತೀಚಿನ ಸುದ್ದಿ

ಜಾಹೀರಾತು