1:17 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’

17/02/2022, 20:57

ಅಬುದಾಬಿ(reporterkarnataka.com):ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.

ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ  ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್, ಮೇಘನಾ ಭಟ್, ದುಬೈ ಉದ್ಯಮಿ, ಗಾಯಕ ಹರೀಶ್ ಶೇರಿಗಾರ್ ಹಾಗೂ ಹತ್ತಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸಲಿದ್ದು, ಈ ಸಂಗೀತ ಕಾರ್ಯಕ್ರಮದ ನಿರೂಪಣೆಯನ್ನು ನಿರೂಪಕಿ ಅನುಪಮ ಭಟ್, ಆರ್ ಜೆ ಎರಾಲ್ ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು