10:20 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿಪಂ ಸಿಇಓ ಸೂಚನೆ

18/02/2022, 08:38

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಾಕೀತು ಮಾಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ, ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ಕೃಷಿ ಚಟುವಟಿಕೆಗಳು, ತೋಟಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಿಸಿದ ಕಿರು ಉದ್ದಿಮೆ ನಡೆಸಲು ಆಸಕ್ತರಿಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಆದ್ಯತೆ ಇದೆ, ಮೀನಿನ ವಿವಿಧ ಬಗೆಯ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಒತ್ತು ನೀಡಬಹುದಾಗಿದೆ, ಕಿರು ಆಹಾರ ಉದ್ದಿಮೆದಾರರು ಒಣ ಮೀನು, ಉಪ್ಪಿನಕಾಯಿ, ಚಿಪ್ಸ್, ಮೀನಿನ ಎಣ್ಣೆ, ಜ್ಯೂಸ್, ಮಾತ್ರೆ, ಮೀನಿನ ಚಟ್ನಿ ಪುಡಿ ಇನ್ನಿತರ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಯೋಜನಾ ವರದಿಯನ್ನು ತಯಾರಿಸಿ ಬ್ಯಾಂಕ್‍ಗಳಿಗೆ ಸಲ್ಲಿಸಿದ್ದಲ್ಲೀ, ಅದರ ಆಧಾರದಲ್ಲಿ ಬ್ಯಾಂಕುಗಳು ಸಾಲಸೌಲಭ್ಯ ನೀಡುತ್ತವೆ, ಈ ಯೋಜನೆಯಡಿ ಮುಖ್ಯವಾಗಿ ಗರಿಷ್ಠ 10 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಹಾಗೂ ಶೇ.50ರಷ್ಟು ಸಬ್ಸಿಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಕಿರು ಆಹಾರ ಉದ್ದಿಮೆಯಡಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯತೆಯ ಬಗ್ಗೆ ತಿಳಿಸಿದ ಡಾ. ಕುಮಾರ್ ಅವರು, ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಬ್ಯಾಂಕ್‍ಗಳಿಗೆ ಕಿರು ಆಹಾರ ಉದ್ದಿಮೆಯಡಿ ಅಗತ್ಯ ನೆರವು ನೀಡಲು ಗುರಿಯನ್ನು ನಿಗದಿ ಪಡಿಸಲಾಗಿದೆ, ಆಸಕ್ತರು ಸಲ್ಲಿಸುವ ಯಾವುದೇ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ, ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಲೋಪದೋಷಗಳಿದ್ದಲ್ಲೀ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಎಚ್.ಆರ್. ನಾಯಕ್, ನಬಾರ್ಡ್‍ನ ಸಹಾಯಕ ಜನರಲ್ ಮ್ಯಾನೇಜರ್ ಸಂಗೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ವಿವಿಧ ಬ್ಯಾಂಕುಗಳ ಮ್ಯಾನೇಜರ್‍ಗಳು ಹಾಗೂ ಇತರರು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು