9:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ  ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ

18/02/2022, 10:39

ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಪ್ರಾರಂಭಿಸಲಾಗುತ್ತಿದೆ. 

ಮಂಗಳೂರಿನಿಂದ ಸಂಜೆ 5ಕ್ಕೆ ಹೊರಟು ಹಾಸನಕ್ಕೆ ರಾತ್ರಿ 9.30ಕ್ಕೆ ತಲುಪಲಿದೆ. ಅದೇ ರೀತಿ ಹಾಸನದಿಂದ  ಮುಂಜಾನೆ 5.15 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ 9.45ಕ್ಕೆ ತಲುಪಲಿದೆ. ಬಸ್ ದರ  320 ರೂ.ಗಳು.

ಮಂಗಳೂರು-ಶಿರಸಿ ವಯಾ ಉಡುಪಿ-ಕುಂದಾಪುರ-ಭಟ್ಕಳ-ಮುರ್ಡೇಶ್ವರ ಕ್ರಾಸ್-ಹೊನ್ನಾವರ ಸರ್ಕಲ್-ಕುಮಟ ಮಾರ್ಗದಲ್ಲಿ ನೂತನವಾಗಿ ವೋಲ್ವೋ ಸಾರಿಗೆಯನ್ನು  ಇದೇ ಫೆ.18ರ ಶುಕ್ರವಾರದಿಂದ ಪ್ರಾರಂಭಿಸಲಾಗುವುದು.

ಮಂಗಳೂರಿನಿಂದ ಮಧ್ಯಾಹ್ನ 3.15 ಹೊರಟು ಶಿರಸಿಗೆ ರಾತ್ರಿ 9.30ಗಂಟೆಗೆ ತಲುಪಲಿದೆ. ಶಿರಸಿಯಿಂದ ಮುಂಜಾನೆ 5 ಗಂಟೆಗೆ ಹೊರಟು ಮಂಗಳೂರನ್ನು ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಬಸ್ ದರ 420 ರೂ.ಗಳಾಗಿವೆ.  

     ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

  ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ: 7760990720, ಹಾಸನ ಬಸ್ ನಿಲ್ದಾಣ: 7760990520, ಸಕಲೇಶಪುರ ಬಸ್ ನಿಲ್ದಾಣ: 7022030210, ಉಡುಪಿ ಬಸ್ ನಿಲ್ದಾಣ: 9663266400, ಕುಂದಾಪುರ ಬಸ್ ನಿಲ್ದಾಣ: 9663266009, ಕುಮಟ ಬಸ್ ನಿಲ್ದಾಣ: 7760991730, ಶಿರಸಿ: 7795984168, ಮಂಗಳೂರು ಘಟಕ: 7760990714/7760990728, ಅವತಾರ್: ಮಂಗಳೂರು-9663211553 ಮೊಬೈಲ್ ನಂಬರ್‍ಗಳನ್ನು ಸಂಪರ್ಕಿಸುವಂತೆ ಕರಾರಸಾಸಂಸ್ಥೆಯ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು