5:21 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ  ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ

18/02/2022, 10:39

ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಪ್ರಾರಂಭಿಸಲಾಗುತ್ತಿದೆ. 

ಮಂಗಳೂರಿನಿಂದ ಸಂಜೆ 5ಕ್ಕೆ ಹೊರಟು ಹಾಸನಕ್ಕೆ ರಾತ್ರಿ 9.30ಕ್ಕೆ ತಲುಪಲಿದೆ. ಅದೇ ರೀತಿ ಹಾಸನದಿಂದ  ಮುಂಜಾನೆ 5.15 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ 9.45ಕ್ಕೆ ತಲುಪಲಿದೆ. ಬಸ್ ದರ  320 ರೂ.ಗಳು.

ಮಂಗಳೂರು-ಶಿರಸಿ ವಯಾ ಉಡುಪಿ-ಕುಂದಾಪುರ-ಭಟ್ಕಳ-ಮುರ್ಡೇಶ್ವರ ಕ್ರಾಸ್-ಹೊನ್ನಾವರ ಸರ್ಕಲ್-ಕುಮಟ ಮಾರ್ಗದಲ್ಲಿ ನೂತನವಾಗಿ ವೋಲ್ವೋ ಸಾರಿಗೆಯನ್ನು  ಇದೇ ಫೆ.18ರ ಶುಕ್ರವಾರದಿಂದ ಪ್ರಾರಂಭಿಸಲಾಗುವುದು.

ಮಂಗಳೂರಿನಿಂದ ಮಧ್ಯಾಹ್ನ 3.15 ಹೊರಟು ಶಿರಸಿಗೆ ರಾತ್ರಿ 9.30ಗಂಟೆಗೆ ತಲುಪಲಿದೆ. ಶಿರಸಿಯಿಂದ ಮುಂಜಾನೆ 5 ಗಂಟೆಗೆ ಹೊರಟು ಮಂಗಳೂರನ್ನು ಬೆಳಿಗ್ಗೆ 11 ಗಂಟೆಗೆ ತಲುಪಲಿದೆ. ಬಸ್ ದರ 420 ರೂ.ಗಳಾಗಿವೆ.  

     ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ.

  ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ: 7760990720, ಹಾಸನ ಬಸ್ ನಿಲ್ದಾಣ: 7760990520, ಸಕಲೇಶಪುರ ಬಸ್ ನಿಲ್ದಾಣ: 7022030210, ಉಡುಪಿ ಬಸ್ ನಿಲ್ದಾಣ: 9663266400, ಕುಂದಾಪುರ ಬಸ್ ನಿಲ್ದಾಣ: 9663266009, ಕುಮಟ ಬಸ್ ನಿಲ್ದಾಣ: 7760991730, ಶಿರಸಿ: 7795984168, ಮಂಗಳೂರು ಘಟಕ: 7760990714/7760990728, ಅವತಾರ್: ಮಂಗಳೂರು-9663211553 ಮೊಬೈಲ್ ನಂಬರ್‍ಗಳನ್ನು ಸಂಪರ್ಕಿಸುವಂತೆ ಕರಾರಸಾಸಂಸ್ಥೆಯ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು