10:04 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

03/05/2021, 22:30

ಬೆಂಗಳೂರು(Reporter Karnataka)

ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇತೃತ್ವದಲ್ಲಿ ವ್ಯವಸ್ಥೆ ಮಾಡಿರುತ್ತಾರೆ ಎನ್ನುವ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ಇವತ್ತು ಸಖತ್ ವೈರಲ್ ಆಗಿತ್ತು.

ಸಾವಿನಲ್ಲೂ ಪ್ರಚಾರ ಮಾಡುವ ಹಂಗು ಯಾಕೆ ಎಂದು ಟ್ರೋಲ್ ಮಾಡುವ ಮೂಲಕ ಬೇಕಾಬಿಟ್ಟಿ ರಾಜಕೀಯ ಫುಡಾರಿಗಳ ನಿದ್ದೆಗೆಡಿಸಿದ್ದಾರೆ. ರಾಜ್ಯವ್ಯಾಪಿ ಈ ಬ್ಯಾನರ್ ಕುರಿತು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಆಕ್ರೋಶಕ್ಕೆ ಮಣಿದು ಈಗ ಬ್ಯಾನರನ್ನು ತೆರವುಗೊಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಚಾರ ತೆವಲು ಯಾವ ರೀತಿಯ ಮುಖಭಂಗಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ದೃಷ್ಟಾಂತವಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಆರ್.ಅಶೋಕ ಅವರ ಫೋಟೊ ಕೂಡ ಈ ಫ್ಲೆಕ್ಸಲ್ಲಿ ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು