10:01 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸ್ಮಶಾನದ ದಾರಿಗೆ ಹಾಕಿದ್ದ ಪ್ರಚಾರದ ಬ್ಯಾನರ್ ಸತ್ತೋಯ್ತು..!!! : ನೆಟ್ಟಿಗರ ಆಕ್ರೋಶಕ್ಕೆ ಮಣಿದ ಪ್ರಚಾರಪ್ರಿಯರು

03/05/2021, 22:30

ಬೆಂಗಳೂರು(Reporter Karnataka)

ಕೋವಿಡ್‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ ಎಂದು ಸೂಚಿಸಿ ಉಚಿತ ನೀರು, ಕಾಫಿ ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಎಸ್.ಮಲ್ಲಯ್ಯನವರ ನೇತೃತ್ವದಲ್ಲಿ ವ್ಯವಸ್ಥೆ ಮಾಡಿರುತ್ತಾರೆ ಎನ್ನುವ ಬ್ಯಾನರ್ ಸೋಶಿಯಲ್ ಮೀಡಿಯಾದಲ್ಲಿ ಇವತ್ತು ಸಖತ್ ವೈರಲ್ ಆಗಿತ್ತು.

ಸಾವಿನಲ್ಲೂ ಪ್ರಚಾರ ಮಾಡುವ ಹಂಗು ಯಾಕೆ ಎಂದು ಟ್ರೋಲ್ ಮಾಡುವ ಮೂಲಕ ಬೇಕಾಬಿಟ್ಟಿ ರಾಜಕೀಯ ಫುಡಾರಿಗಳ ನಿದ್ದೆಗೆಡಿಸಿದ್ದಾರೆ. ರಾಜ್ಯವ್ಯಾಪಿ ಈ ಬ್ಯಾನರ್ ಕುರಿತು ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಜನರ ಆಕ್ರೋಶಕ್ಕೆ ಮಣಿದು ಈಗ ಬ್ಯಾನರನ್ನು ತೆರವುಗೊಳಿಸಿದ್ದಾರೆ.
ಒಟ್ಟಿನಲ್ಲಿ ಪ್ರಚಾರ ತೆವಲು ಯಾವ ರೀತಿಯ ಮುಖಭಂಗಕ್ಕೆ ಕಾರಣವಾಗುತ್ತದೆ ಎನ್ನುವುದಕ್ಕೆ ಇದೊಂದು ಸಣ್ಣ ದೃಷ್ಟಾಂತವಾಗಬಹುದು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಆರ್.ಅಶೋಕ ಅವರ ಫೋಟೊ ಕೂಡ ಈ ಫ್ಲೆಕ್ಸಲ್ಲಿ ಬಳಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು