6:44 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ

18/02/2022, 14:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಒಂದು ಕಡೆ ರಾಜ್ಯದಲ್ಲಿ ಹಿಜಾಬ್ /ಕೇಸರಿ ವಿವಾದ ತಲೆದೋರಿದರೆ, ಇನ್ನೊಂದು ಕಡೆ ಅಥಣಿ ತಾಲೂಕಿನ ಹಲ್ಯಾಳ ಯುವಕರು ಸ್ವಯಂ ಪ್ರೇರಣೆಯಿಂದ ಕೃಷ್ಣಾ ನದಿ ಸ್ವಚ್ಛತೆಗೆ  ಮುಂದಾಗಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.


ಹಲ್ಯಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರವ್ವ ಪರಸಪ್ಪ ಮಾದರ, ಅವರ ಮಗನಾದ ರಾಹುಲ್ ಪರಸಪ್ಪ, ಮಾದರ್ ಹಾಗೂ ವಿನೋದ್ ಅರ್ಜುನ್ ಕುರಣಿ, ಪುಂಡಲಿಕ್ ಚಂದ್ರಪ್ಪ ಮಾದರ ಅವರು ಸ್ವಯಂ ಪ್ರೇರಿತವಾಗಿ ನದಿ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಚಿಂಚಲಿ ಮಯಕ್ಕಾ ದೇವಿಯ ಜಾತ್ರೆ ನಿಮಿತ್ಯ ಸಾವಿರಾರು ಭಕ್ತಾದಿಗಳು ಮೊದಲು ಕೃಷ್ಣ ನದಿ ಪವಿತ್ರ ಸ್ನಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ತದನಂತರ ದೇವಿಯ ದರ್ಶನಕ್ಕೆ ಹೋಗುತ್ತಾರೆ. ಹೋದ ವರ್ಷ ಪ್ರವಾಹದಿಂದ ನದಿ ತೀರಕ್ಕೆ ಅಪಾರ ಪ್ರಮಾಣದಲ್ಲಿ ಮುಳ್ಳುಗಳು ತುಂಬಿ ಜನಗಳಿಗೆ ಸಮಸ್ಯೆ ಆಗುವುದನ್ನು ಅರಿತು ಖುದ್ದಾಗಿ ಗೆಳೆಯರೊಂದಿಗೆ ನದಿ ಸ್ವಚ್ಛತೆ ಕಾರ್ಯವನ್ನು  ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು