1:54 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ರಾಜಕೀಯ ಒಣ ಪ್ರತಿಷ್ಠೆಗೆ ಬಲಿಯಾಗುತ್ತಿರುವ ಅಧಿವೇಶನ: ದಿನಕ್ಕೆ 1.5 -2 ಕೋಟಿ ರೂ. ನಷ್ಟಕ್ಕೆ ಹೊಣೆ ಯಾರು?; ಮಾಜಿ ಸಿಎಂ ಎಚ್‍ಡಿಕೆ ಆಕ್ರೋಶ 

18/02/2022, 15:53

ಬೆಂಗಳೂರು(reporterkarnataka.com,): ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ 

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ಮುಂದುವರಿದಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ ಎಂದು ಕಿಡಿಕಾರಿದರು.

‘ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ್ದರು.

ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ಎನ್ನುವಂತಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

10 ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ..? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ‘ಕಾಲ ಕಸ’ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?. ಕೋವಿಡ್’ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ..?

ಕಲಾಪಕ್ಕೆ ‘ಜನಪರ ಅಜೆಂಡಾ’ ಇರಬೇಕೆ ವಿನಾ ‘ಚುನಾವಣೆ ಅಜೆಂಡಾ’ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. ಜನರು ಕಷ್ಟದಲ್ಲಿದ್ದಾರೆ. ಕೋವಿಡ್’ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.

ಇತ್ತೀಚಿನ ಸುದ್ದಿ

ಜಾಹೀರಾತು