4:06 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ರಾಜಕೀಯ ಒಣ ಪ್ರತಿಷ್ಠೆಗೆ ಬಲಿಯಾಗುತ್ತಿರುವ ಅಧಿವೇಶನ: ದಿನಕ್ಕೆ 1.5 -2 ಕೋಟಿ ರೂ. ನಷ್ಟಕ್ಕೆ ಹೊಣೆ ಯಾರು?; ಮಾಜಿ ಸಿಎಂ ಎಚ್‍ಡಿಕೆ ಆಕ್ರೋಶ 

18/02/2022, 15:53

ಬೆಂಗಳೂರು(reporterkarnataka.com,): ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ 

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ಮುಂದುವರಿದಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ ಎಂದು ಕಿಡಿಕಾರಿದರು.

‘ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ್ದರು.

ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ಎನ್ನುವಂತಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

10 ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ..? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ‘ಕಾಲ ಕಸ’ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?. ಕೋವಿಡ್’ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ..?

ಕಲಾಪಕ್ಕೆ ‘ಜನಪರ ಅಜೆಂಡಾ’ ಇರಬೇಕೆ ವಿನಾ ‘ಚುನಾವಣೆ ಅಜೆಂಡಾ’ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. ಜನರು ಕಷ್ಟದಲ್ಲಿದ್ದಾರೆ. ಕೋವಿಡ್’ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.

ಇತ್ತೀಚಿನ ಸುದ್ದಿ

ಜಾಹೀರಾತು