1:46 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹೀಗೊಂದು ಹೇಯ ಕೃತ್ಯ: ಹೆತ್ತಬ್ಬೆಗೆ ಜೀಪ್‌ನಿಂದ ಗುದ್ದಿಸಿ ಕೊಲೆ ಮಾಡಿದ ದುಷ್ಟ ಪುತ್ರ

18/02/2022, 19:52

ಮೈಸೂರು(reporterkarnataka.com): ನಡೆದುಕೊಂಡು ಹೋಗುತ್ತಿದ್ದ ತನ್ನ ತಾಯಿಗೆ ಪುತ್ರನೊಬ್ಬ ಜೀಪ್ ನಿಂದ ಗುದ್ದಿಸಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ನಡೆದಿದೆ.

ನಾಗಮ್ಮ(65) ಹತ್ಯೆಯಾದ ತಾಯಿ. ಮೃತಳ ಪುತ್ರ ಹೇಮರಾಜ್(45) ಎಂಬಾತನೇ ಕೃತ್ಯವೆಸಗಿದ ಆರೋಪಿ. ಹಣಕಾಸಿನ ವಿಚಾರಕ್ಕೆ ಸಂಬoಧಿಸಿದoತೆ ತಾಯಿ ಮಗನ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಇಂದು ತಾಯಿಯ ವಿರುದ್ಧ ಕುಪಿತಗೊಂಡಿದ್ದ ಮಗ ಹೇಮರಾಜ್, ರಸ್ತೆ ಬದಿಯಲ್ಲಿ ತೆರಳುತ್ತಿದ್ದ ತಾಯಿ ನಾಗಮ್ಮಗೆ ಟ್ರಾವೆಲ್ ಜೀಪ್ ನಿಂದ ಡಿಕ್ಕಿಹೊಡೆಸಿದ್ದಾನೆ.

ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ನಾಗಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ಬೆಟ್ಟದಪುರ ಠಾಣೆಯ ಪೊಲೀಸರು ಆರೋಪಿ ಹೇಮರಾಜನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು