8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕನ್ನಡದ ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ

19/02/2022, 07:49

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿವೆ.

ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಅವರಿಗೆ ಬೆಂಗಳೂರಿನ ಕಸ್ತೂರಬಾ ನಗರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಟ ರಾಜೇಶ್ ಬೆಂಗಳೂರಿನಲ್ಲೇ ಜನಿಸಿದವರು. ಇವರ ನಿಜನಾಮ ಮುನಿ ಚೌಡಪ್ಪ. ಚಿಕ್ಕವಯಸ್ಸಿನಲ್ಲೇ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಮುನಿ ಚೌಡಪ್ಪ ರಂಗಭೂಮಿ ಪ್ರವೇಶಿಸಿದರು. ತಂದೆ-ತಾಯಿಗೆ ಗೊತ್ತಿಲ್ಲದಂತೆ ‘ಸುದರ್ಶನ ನಾಟಕ ಮಂಡಳಿ’ ಸೇರಿದ ಮುನಿ ಚೌಡಪ್ಪ ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಹೆಸರಿನಿಂದ ಗುರುತಿಸಿಕೊಂಡರು.

1968ರಲ್ಲಿ ತೆರೆಕಂಡ ‘ನಮ್ಮ ಊರು’ ಚಿತ್ರದಲ್ಲಿ ತಮ್ಮ ಹೆಸರನ್ನು ವಿದ್ಯಾಸಾಗರ್‌ ಇಂದ ರಾಜೇಶ್‌ ಎಂದು ಬದಲಾಯಿಸಿಕೊಂಡರು. ನಟ ರಾಜೇಶ್ ಅವರ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಚಿತ್ರ ‘ನಮ್ಮ ಊರು’. ಸಿ.ವಿ.ಶಿವಶಂಕರ್ ನಿರ್ದೇಶನದ ‘ನಮ್ಮ ಊರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ನಟ ರಾಜೇಶ್ ಗಾಯಕರಾಗಿಯೂ ಜನಪ್ರಿಯತೆ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು