7:47 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿಲ್ಲ: ಶಾಸಕ ರಘುಪತಿ ಭಟ್

19/02/2022, 08:49

ಉಡುಪಿ(reporterkarnataka.com): ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಈಗ ಬಿಜೆಪಿಯ ಬಾಗಿಲು ತೆರೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಉಡುಪಿ ಬಿಜೆಪಿ ಶಾಸಕ ಕೆ. ರಘುಪತಿ‌ ಭಟ್ ಹೇಳಿದರು.

ಉಡುಪಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಮೋದ್ ಸೇರ್ಪಡೆಗೆ ನಾನು ವಿರೋಧ ವ್ಯಕ್ತಪಡಿಸಿದ್ದು ನಿಜ. ನಾನು ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾರಣ, ನನ್ನ ಸ್ಥಾನಕ್ಕೆ ಕುತ್ತು ಬರಬಹುದೆಂಬ ನಿಟ್ಟಿನಿಂದ ಸ್ವಭಾವಿಕವಾಗಿ ವಿರೋಧ ಮಾಡಿದ್ದೇನು. ಆಗಲೂ ಪಕ್ಷಕ್ಕೆ ಸೇರ್ಪಡೆಗೆ ನನ್ನ‌ ಅಭ್ಯಂತರ ಇರಲಿಲ್ಲ‌. ಆದರೆ, ಅಭ್ಯರ್ಥಿ ಮಾಡುವುದಕ್ಕೆ ನನ್ನ ವಿರೋಧ ಇತ್ತು ಎಂದು ತಿಳಿಸಿದ್ದಾರೆ.

ಬೇರೆ ಪಕ್ಷದ ನಾಯಕನ ಆಗಮನದಿಂದ ಪಕ್ಷ ಬಲವರ್ಧನೆ ಆಗುತ್ತದೆ ಎಂದಾದರೆ ನನಗೆ ಸಂತೋಷವೇ. ಈಗ ನನ್ನ ಬುಡ ಗಟ್ಟಿಯಾಗಿದೆ‌. ಯಾವುದೇ ನಾಯಕರ ಸೇರ್ಪಡೆಗೆ ನಾನು ವಿರೋಧ ಮಾಡಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವುದಾರೆ ಸ್ವಾಗತ ಎಂದರು.

ಎಲ್ಲ ಶಾಸಕರು ಪಕ್ಷದ ಜೊತೆಗೆ ಅವರ ಬುಡ ಗಟ್ಟಿ ಮಾಡಲು ನೋಡುವುದು ಸಹಜ..ಅದರಲ್ಲಿ ಎರಡು ಮಾತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು