7:48 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಪದವಿ ಕಾಲೇಜಿನ ಹಿಜಾಬ್ ವಿವಾದ: ವಿದ್ಯಾರ್ಥಿ  ಮುಖಂಡರ ಜತೆ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸಚಿವ ಡಾ.ಅಶ್ವತ್ಥ ನಾರಾಯಣ ಭೇಟಿ

19/02/2022, 10:30

ಬೆಂಗಳೂರು(reporterkarnataka.com): ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಕೆಲವು ಪದವಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸುತ್ತಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ಮುಖಂಡರೊಂದಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಪ್ರತಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್ ಭೇಟಿ ಮಾಡಿ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ಸಚಿವ  ಅಶ್ವತ್ಥ ನಾರಾಯಣ ರವರು ನಿರ್ದಿಷ್ಟ ಸಮವಸ್ತ್ರ ನಿಗದಿಪಡಿಸದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಿಜಾಬ್ ಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಮೂಡಿಸಬಾರದೆಂದು ಸ್ಪಷ್ಟವಾಗಿ ತಿಳಿಸಿದ್ದು ಕೆಲವು CBSE ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯು ಸಮವಸ್ತ್ರ ನಿಗದಿಪಡಿಸಿದ್ದಲ್ಲಿ ಕೋರ್ಟ್ ಆದೇಶವನ್ನು ಪರಿಗಣಿಸಿ ವ್ಯವಸ್ಥಿತ ರೀತಿಯಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಕಾನೂನನ್ನು ಗೌರವಿಸುವ ಕೆಲಸ ಮಾಡಬೇಕೆಂದು ಅವರು ತಿಳಿಸಿದರು.

ಕಾಲೇಜು ಅಥವಾ ಶಾಲಾ ಗೇಟುಗಳಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ತಡೆಯುವಂತಿಲ್ಲ. ಕಾಲೇಜು ಅಥವಾ ಶಾಲಾ ಆವರಣದಲ್ಲಿ ಹಿಜಾಬ್ ಧರಿಸಬಹುದಾಗಿಯೂ, ಅಲ್ಲದೇ ಶಿಕ್ಷಕಿಯರು ಹಾಗೂ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂಬುದಾಗಿ ಸ್ಪಷ್ಟವಾಗಿ ತಿಳಿಸಿದರು.

ನಂತರ ಯು.ಟಿ.ಖಾದರ್ ನೇತೃತ್ವದ ಶಾಸಕರ ನೀಯೋಗ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿ ಮಾಡಿ ಕೂಡಾ ಹಿಜಾಬ್ ವಿವಾದದ ಬಗ್ಗೆ ಮಾತುಕತೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು